Wednesday 25 November 2015

ವರ್ಗೀಸ್ ಕುರಿಯನ್

ನವೆಂಬರ್‍ 26
🐄🐃🐄ಮಿಲ್ಕ್ ಮ್ಯಾನ್ ಆಪ್ ಇಂಡಿಯಾ ಎಂದೇ ಪ್ರಸಿದ್ದಿ ಪಡೆದ
ವರ್ಗೀಸ್ ಕುರಿಯನ್ ಅವರ ಜನ್ಮದಿನ ಇಂದು🐄🐄🐃

👉🏿(gkmani2u🍃🐃🍃
🍃 ರೋಷನ್ ಜಗಳೂರು🍃)

ಜನನ::ನವೆಂಬರ್ 26 1921
-
 🐄ಅಮುಲ್ ಡೈರಿ ಸಂಸ್ಥೆಯ ಸ್ಥಾಪಕರು ಮತ್ತು ಭಾರತದಲ್ಲಿ ಆಪರೇಶನ್ ಫ್ಲಡ್ ಎಂಬ ಹೆಸರಿನ ಕ್ಷೀರಕ್ರಾಂತಿಯ ಪ್ರಮುಖ ಪಾತ್ರಧಾರಿ.

🐄ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟ (GCMMF)ದ ಸಂಸ್ಥಾಪಕ ಅಧ್ಯಕ್ಷರಾಗಿ , ಕುರಿಯನ್ ಅವರು ಅಮುಲ್ ಡೈರಿ ಉತ್ಪನ್ನಗಳ ಬ್ರಾಂಡ್ ನ ಸೃಷ್ಟಿ ಮತ್ತು ಯಶಸ್ಸಿಗೆ ಕಾರಣರಾದವರು. ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟದಲ್ಲಿ ಅವರ ಸಾಧನೆ ಕಂಡು ರಾಷ್ಟ್ರೀಯ ಮಟ್ಟದಲ್ಲಿ ನ ಅಮುಲ್ ಯಶಸ್ಸನ್ನು ಪುನರಾವರ್ತಿಸಲು, 1965ರಲ್ಲಿ ಅವರನ್ನು ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿ(NDDB) ಯ ಸ್ಥಾಪಕ ಅಧ್ಯಕ್ಷರನ್ನಾಗಿ ನೇಮಿಸಿದರು. ಕೆಲವು ವರ್ಷಗಳ ನಂತರ, ಕುರಿಯನ್ ರ ಮುಂದಾಳುತನದಲ್ಲಿ ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿಯು
👉🏿ಆಪರೇಷನ್ ಫ್ಲಡ್
(ಅಥವಾ ವೈಟ್ ರೆವಲ್ಯೂಷನ್-ಕ್ಷೀರಕ್ರಾಂತಿ ) ಎಂಬ ಜಗತ್ತಿನ ಅತಿ ದೊಡ್ಡ ಡೈರಿ ಅಭಿವೃದ್ಧಿ ಯೋಜನೆಯನ್ನು ಪ್ರಾರಂಭಿಸಿತು. ಆಪರೇಷನ್ ಫ್ಲಡ್ ಯೋಜನೆಯು ಭಾರತವನ್ನು ವಿಶ್ವದ ಅತ್ಯಂತ ದೊಡ್ಡ ಹಾಲು ಉತ್ಪಾದಕ ದೇಶವನ್ನಾಗಿ ಮಾಡಿತು;
👉🏿2010-11ರಲ್ಲಿ, ಜಾಗತಿಕ ಉತ್ಪಾದನೆಯ ಸುಮಾರು ಪ್ರತಿ ನೂರಕ್ಕೆ 17 ರಷ್ಟು ಭಾಗವು ಭಾರತದ್ದಾಗಿತ್ತು .

👳🏾"ಭಾರತದ ಹಾಲು ವಿತರಕ" ಮತ್ತು "ಕ್ಷೀರ ಕ್ರಾಂತಿಯ ಪಿತಾಮಹ" ಎಂದು ಬಣ್ಣಿಸಲ್ಪಟ್ಟ ಕುರಿಯನ್ ರವರು ಭಾರತದ ಎರಡನೇ ಅತ್ಯುನ್ನತ ನಾಗರಿಕ ಗೌರವವಾದ '"ಪದ್ಮ ವಿಭೂಷಣ" ಪ್ರಶಸ್ತಿ,
ವಿಶ್ವ ಆಹಾರ ಪ್ರಶಸ್ತಿ ಮತ್ತು ಮ್ಯಾಗ್ಸೇಸೆ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ.

🍃ಪ್ರಾರಂಭಿಕ ಜೀವನ🍃

ಅವರು ಹುಟ್ಟಿದ್ದು ಕೇರಳದ ಕೋಝಿಕೋಡ್ (ಅಂದರೆ ಕ್ಯಾಲಿಕಟ್) ನಲ್ಲಿ. ಭೌತಶಾಸ್ತ್ರದಲ್ಲಿ ಪದವಿಯ ನಂತರ ಬಿ.ಇ. ( ಮೆಕ್ಯಾನಿಕಲ್ ಇಂಜಿನಿಯರಿಂಗ್) ಮಾಡಿದರು. ಬಳಿಕ ಜಮ್ ಷೆಡ್ ಪುರದ ಟಾಟಾ ಸ್ಟೀಲ್ ತಾಂತ್ರಿಕ ಸಂಸ್ಥೆಯಲ್ಲಿ ಅಧ್ಯಯನ ಮಾಡಿ ಮೆಟಲರ್ಜಿಕಲ್ ಇಂಜಿನಿಯರಿಂಗ್ ನಲ್ಲಿ ಎಂ.ಎಸ್ಸಿ. ಮಾಡಲು ಸ್ಕಾಲರ್ಶಿಪ್ ಪಡೆದುಕೊಂಡು ಅಮೇರಿಕಕ್ಕೆ ತೆರಳಿದರು.

🍃ವೃತ್ತಿ ಜೀವನ🍃

ಅಮೆರಿಕದಿಂದ 1948ರಲ್ಲಿ ಭಾರತಕ್ಕೆ ಹಿಂದಿರುಗಿದ ವರ್ಗಿಸ್ ಕುರಿಯನ್ನರು ಸರ್ಕಾರಿ ಸೇವೆಗೆ ಸೇರಿ ಆನಂದ್ ನಗರದಲ್ಲಿದ್ದ ಹಾಲಿನ ಪೌಡರ್ ಉತ್ಪಾದಿಸುವ ಸಣ್ಣ ಘಟಕವೊಂದರಲ್ಲಿ ತಂತ್ರಜ್ಞರಾಗಿ ಕೆಲಸಕ್ಕೆ ಸೇರಿದರು. ಇದೇ ಸಮಯದಲ್ಲಿ ಕೈರಾ ಜಿಲ್ಲೆಯ ಹಾಲು ಉತ್ಪಾದನಾ ಸಂಘಟನೆಯು ತನ್ನ ಉಳಿಗಾಲಕ್ಕಾಗಿ ಕಷ್ಟಪಡುತ್ತಿದ್ದುದನ್ನು ಗಮನಿಸಿದ ಕುರಿಯನ್ನರು, ಸರ್ಕಾರಿ ಸೇವೆಯನ್ನು ತ್ಯಜಿಸಿ ಆ ಸಂಸ್ಥೆಗೆ ಜೀವ ತುಂಬಲು ಸ್ವಯಂ ಪ್ರೇರಣೆಯಿಂದ ಮುಂದೆ ಬಂದರು. ವರ್ಗಿಸ್ ಕುರಿಯನ್ನರ ಈ ಸಾಹಸ ‘ಅಮುಲ್’ ಎಂಬ ಹೊಸ ಚರಿತ್ರೆಗೆ ನಾಂದಿಹಾಡಿತು. ಹೀಗೆ ಅವರು ಡೈರಿ ಅಭಿವೃದ್ಧಿಯ ಸಹಕಾರಿ ಮಾದರಿಯನ್ನು ಭಾರತದ ಅತಿದೊಡ್ಡ ಮತ್ತು ಅತ್ಯಂತ ಯಶಸ್ವೀ ಉದ್ಯಮವನ್ನಾಗಿ ಮಾಡಿದರು. ಪ್ರಧಾನಿ ಜವಾಹರಲಾಲ್ ನೆಹರು ಅಮುಲ್ "ಫ್ಯಾಕ್ಟರಿ" ಉದ್ಘಾಟಿಸಲು ಆನಂದ್ ಗೆ ಭೇಟಿ ಕೊಟ್ಟಾಗ ಅವರ ಅದ್ಭುತ ಕಾರ್ಯವನ್ನು ಮೆಚ್ಚಿ ಅವರನ್ನು ಆಲಂಗಿಸಿದರು.

👉🏿ಸಹಕಾರಿತನದ ಅಮುಲ್ ಮಾದರಿಯು ಎಷ್ಟು ಯಶಸ್ವಿಯಾಯಿತೆಂದರೆ ಗುಜರಾತ್ ಹಾಲಿನ ಒಕ್ಕೂಟದ ಯಶಸ್ಸು ಲಾಲ್ ಬಹದ್ದೂರ್ ಶಾಸ್ತ್ರಿ ಅವರನ್ನು ರಾಷ್ಟ್ರೀಯ ಡೈರಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲು ಪ್ರೇರೇಪಿಸಿ ಡಾ. ವರ್ಗಿಸ್ ಕುರಿಯನ್ ಅವರನ್ನು ಅದರ ಅಧ್ಯಕ್ಷರನ್ನಾಗಿ ನೇಮಿಸುವಂತೆ ಮಾಡಿತು. ಹೀಗೆ 1965ರ ವರ್ಷದಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರಿಂದ ರಾಷ್ತ್ರೀಯ ಹಾಲು ಉತ್ಪಾದನಾ ನಿಗಮಕ್ಕೆ ಅಧ್ಯಕ್ಷರೆಂದು ನೇಮಿಸಲ್ಪಟ್ಟ ವರ್ಗಿಸ್ ಕುರಿಯನ್ನರು ಮುಂದೆ 1973ರಲ್ಲಿ ಗುಜರಾತ್ ಕೋ-ಆಪರೇಟಿವ್ ಮಿಲ್ಕ್ ಮಾರ್ಕೆಟಿಂಗ್ ಫೆಡರೇಶನ್ ಸ್ಥಾಪಿಸಿ ಹಾಲಿನ ಉತ್ಪನ್ನಗಳನ್ನು ಮಾರುಕಟ್ಟೆಯಲ್ಲಿ ಸಮರ್ಥವಾಗಿ ವಿತರಣೆಯಾಗುವಂತೆ ವ್ಯವಸ್ಥೆ ಮಾಡಿದರು. ಹೀಗೆ ವರ್ಗಿಸ್ ಕುರಿಯನ್ನರು ಭಾರತವನ್ನು ಅತ್ಯಂತ ಬ್ರಹತ್ ಹಾಲು ಉತ್ಪಾದನಾ ದೇಶವನ್ನಾಗಿ ಮಾಡಿದರು.

👉🏿ಕುರಿಯನ್ ಮತ್ತು ಅವರ ತಂಡದವರು ಆಕಳ ಹಾಲಿನ ಬದಲಾಗಿ ಎಮ್ಮೆಯ ಹಾಲಿನಿಂದ ಹಾಲಿನ ಪುಡಿ ಮತ್ತು ದಟ್ಟಗೊಳಿಸಿದ ಹಾಲು ಮಾಡುವ ಪ್ರಕ್ರಿಯೆಯನ್ನು ಕಂಡು ಹಿಡಿದರು. ಅಮುಲ್ ಯಶಸ್ವಿಯಾಗಲು ಮತ್ತು ಹಾಲಿನ ಪುಡಿ ಹಾಗೂ ದಟ್ಟಗೊಳಿಸಿದ ಹಾಲನ್ನು ಮಾಡಲು ಹಸುವಿನ ಹಾಲು ಬಳಸುವ ನೆಸ್ಲೆ ವಿರುದ್ಧ ಉತ್ತಮ ಪೈಪೋಟಿ ನೀಡಲು ಇದೇ ಪ್ರಮುಖ ಕಾರಣವಾಯಿತು. ಯುರೋಪ್ ನಲ್ಲಿ ಹಸುವಿನ ಹಾಲು ಹೇರಳವಾಗಿದ್ದರೆ ಭಾರತದಲ್ಲಿ, ಎಮ್ಮೆ ಹಾಲು ಪ್ರಮುಖ ಕಚ್ಚಾ ಪದಾರ್ಥವಾಗಿದೆ.

👉🏿ಅತ್ಯಂತ ಕುಶಲ ಹಾಗೂ ಶ್ರಮಭರಿತ ದುಡಿಮೆಗೆ ಹೆಸರಾದ ವರ್ಗಿಸ್ ಕುರಿಯನ್ನರು ಯಾವುದೇ ಪ್ರತೀಕೂಲ ಪರಿಸ್ಥಿತಿ ಇದ್ದಾಗ್ಯೂ ಹೇಗೆ ಒಬ್ಬ ವ್ಯಕ್ತಿ ಇಡೀ ಸಮಾಜಕ್ಕೆ ದೇಶಕ್ಕೆ ದಾರಿ ದೀಪವಾಗಬಹುದು ಎಂಬುದನ್ನು ಭಾರತೀಯ ಸಮಾಜದಲ್ಲಿ ಸಮರ್ಥವಾಗಿ ಪ್ರತಿಬಿಂಬಿಸಿದ್ದು, ಭಾರತೀಯ ಗ್ರಾಮೀಣ ಅಭಿವೃದ್ಧಿಯ ಆಸಕ್ತಿಯುಳ್ಳ ಹಲವಾರು ಸಂಘಟನೆಗಳ ನೇತಾರರು ಮಾರ್ಗದರ್ಶಕರು ಕೊಡಾ ಆಗಿದ್ದರು.

👉🏿🐄ಡೈರಿಗಳ ಉತ್ಪನ್ನವನ್ನು ಮಾರಾಟಮಾಡಲು 1973ರಲ್ಲಿ ಕುರಿಯನ್ ಅವರು ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟವನ್ನು ಸ್ಥಾಪಿಸಿದರು. ಇಂದು ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟ ವು ಭಾರತದಷ್ಟೇ ಅಲ್ಲ ಹೊರದೇಶಗಳಲ್ಲಿ ಕೂಡ ಮಾರಾಟಮಾಡುತ್ತದೆ. ಅವರು ಅಲ್ಲಿನ ಆಡಳಿತದೊಂದಿಗಿನ ಭಿನ್ನಾಭಿಪ್ರಾಯಗಳ ಕಾರಣ 2006 ರಲ್ಲಿ ಅದರ ಅಧ್ಯಕ್ಷ ಹುದ್ದೆಯನ್ನು ತ್ಯಜಿಸಿದರು.

🍃ಪ್ರಶಸ್ತಿ ಗೌರವ🍃

ವಿಶ್ವ ಆಹಾರ ಪ್ರಶಸ್ತಿ, ಮ್ಯಾಗ್ಸೇಸೆ ಪ್ರಶಸ್ತಿ, ಪದ್ಮಶ್ರೀ, ಪದ್ಮಭೂಷಣ, ಪದ್ಮವಿಭೂಷಣ, ಕೃಷಿರತ್ನ ಪ್ರಶಸ್ತಿಗಳು, ಹಲವು ವಿಶ್ವ ವಿದ್ಯಾಲಯದ ಡಾಕ್ಟರೇಟ್, ಹಲವಾರು ಅಂತರರಾಷ್ಟ್ರೀಯ ಪ್ರಶಸ್ತಿಗಳು ಹಾಗೂ ಇವೆಲ್ಲವನ್ನೂ ಮೀರಿದ ಜನಪ್ರಿಯತೆ, ಜನನಂಬುಗೆ ಕುರಿಯನ್ ಅವರನ್ನು ಅರಸಿ ಬಂದಿದವು. ಶ್ಯಾಮ್ ಬೆನಗಲ್ ಅವರ ‘ಮಂಥನ್’ ಅಂತಹ ಸುಂದರ ಚಿತ್ರಗಳು ಸಹಾ ವರ್ಗಿಸ್ ಕುರಿಯನ್ನರ ಕಾಯಕದ ಪ್ರೇರಣೆ ಹೊಂದಿವೆ.

🍃ಆತ್ಮಚರಿತ್ರೆ🍃

ಅನೇಕ ಇತರ ಸಂಸ್ಥೆಗಳಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ಕುರಿಯನ್ ಜೀವನದ ಕಥೆಯನ್ನು "ಐ ಟೂ ಹ್ಯಾಡ್ ಎ ಡ್ರೀಮ್" ಎಂಬ ಅವರ ಆತ್ಮಚರಿತ್ರೆಯಲ್ಲಿ ಓದಬಹುದು.

🍃ವಿದಾಯ🍃

9 ಸೆಪ್ಟೆಂಬರ್ 2014 ರಂದು ತೀರಿಕೊಂಡ ಅವರು ನಾಸ್ತಿಕರಾಗಿದ್ದರು.
🐄🐄🐄🐄🐄🐄🐄🐄🐃
🐄🐄ರೋಷನ್ ಜಗಳೂರು
(gkmani2u)🐄🐄🐄🐄🐄

ಕೃಪೆ: encylopedia

Monday 12 October 2015

Economic Nobel 2015

🌹BREAKING NEWS🌹
The Nobel Prize in Economic Sciences 2015 was awarded to
👀🌹Angus Deaton🌹👀
of Princeton University, NJ, USA,
"for his analysis of consumption, poverty, and welfare". By linking detailed individual choices and aggregate outcomes, his research has helped transform the fields of microeconomics, macroeconomics, and development economics.
🌿🌿🌿🌿🌿🌿🌿🌿🌿

ಕಲಾಂ

👀👀👀👀👀👀👀
🌿ಕಲಾಂ ಇಂಟರ್‍ ನ್ಯಾಚನಲ್ ಪೌಂಢೇಶನ್🌿
ROSHAN jagalur

ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರ ಆಲೋಚನೆಯನ್ನು ಜಗತ್ತಿನಾದ್ಯಂತ ಪಸರಿಸುವ ನಿಲುವಿನೊಂದಿಗೆ ಕಲಾಂ ಸಂಬಂಧಿಕರು
🌹'ಡಾ.ಎ ಪಿ ಜೆ ಅಬ್ದುಲ್ ಕಲಾಂ ಇಂಟರ್ ನ್ಯಾಷನಲ್ ಫೌಂಡೇಶನ್'🌹 ಹುಟ್ಟುಹಾಕಿದ್ದಾರೆ. ಇದರ ಲಾಂಛನವನ್ನು
👉🏿'ಹೌಸ್ ಆಫ್ ಕಲಾಂ' ಎಂಬ ಶೀರ್ಷಿಕೆ ಅಡಿಯಲ್ಲಿ ಅಕ್ಟೋಬರ್ 12ರ ಸೋಮವಾರದಂದು ಬಿಡುಗಡೆಗೊಳಿಸಲಾಯಿತು.

👉🏿ಕಲಾಂ ಅವರ ವ್ಯಕ್ತಿತ್ವ ಇಂದಿನ ಯುವಪೀಳಿಗೆಗೆ ಸ್ಪೂರ್ತಿದಾಯಕವಾಗಿದೆ. ಭಾರತದ ಬಗ್ಗೆ ಹಲವಾರು ಕನಸುಗಳನ್ನು ಇಟ್ಟುಕೊಂಡಿದ್ದರು. ಇವರ ಕನಸುಗಳನ್ನು ಇಂದಿನ ಯುವಪೀಳಿಗೆಯ ಮೂಲಕ ಪೂರೈಸಲು ಆಲೋಚಿಸಿದ್ದೇವೆ ಎಂದು ಕಲಾಂ ಅವರ ಸಹೋದರನ ಮಗಳು ಫೌಂಡೇಶನ್ ಮುಖ್ಯಸ್ಥೆ
ಡಾ. ನಸೀಮಾ ಮರಾಕಯಾರ್ ಹೇಳಿದ್ದಾರೆ.

👉🏿ಯುವಜನತೆಯಲ್ಲಿ ಓದುವ ಹವ್ಯಾಸ ಚಿಗುರಿಸುವ ಸಲುವಾಗಿ 'ಹೋಮ್ ಲೈಬ್ರೇರಿ' ಎಂಬ ಕಾರ್ಯ ಆರಂಭಿಸಲಿದ್ದೇವೆ. ಯುವಜನತೆ ವಿಜ್ಞಾನ ಜಗತ್ತಿನ ಕುರಿತಾಗಿ ಒಲವನ್ನು ಬೆಳೆಸುವ ಪ್ರಯತ್ನ ಮಾಡಲಿದ್ದೇವೆ ಎಂದು ಎಂ.ಜೆ ಶೇಖ್ ದಾವುದ್ ತಿಳಿಸಿದ್ದಾರೆ.
🍒🍒🍒🍒🍒🍒🍒🍒

Wednesday 7 October 2015

ರಸಾಯನಶಾಸ್ತ್ರದ ನೊಬೆಲ್ 2015

🌹🌹ರಸಾಯನ ಶಾಸ್ತ್ರದ🌹🌹      👉👉ನೊಬೆಲ್ ಪ್ರಕಟ
(ROSHAN JAGALUR)

📡ಲ‍ಂಡನ್ನಿನ ಡಾ.ಥಾಮಸ್ ಲಿಂಡಾಲ್,
📡ಪೌಲ್ ಎಲ್ ಮಾಡ್ರಿಚ್ ಮತ್ತು 📡ಅಜಿಜ್ ಸ್ಯಾನ್ ಕರ್ ಅವರಿಗೆ ರಾಸಾಯನಿಕ ಶಾಸ್ತ್ರದ
(ಡಿಎನ್ ಎ ಬಂಧ) ಕುರಿತಾಗಿ ವಿಭಿನ್ನ ಸಂಶೋಧನೆ ಕೈಗೊಂಡ ಕಾರಣ 2015ನೇ ಸಾಲಿನ ನೊಬೆಲ್ ಪ್ರಶಸ್ತಿ ಲಭಿಸಿದೆ.
🌹🌹🌹🌹🌹🌹🌹🌹
📡ಲಂಡನ್ನಿನ ಫ್ರಾನ್ಸಿಸ್ ಕ್ರಿಕ್
ಇನ್ ಸ್ಟಿಟ್ಯೂಟ್ ನ ಡಾ. ಲಿಂಡಾಲ್ ಅವರು
ಅವನತಿಯ ಹಂತದಲ್ಲಿಯ
ಡಿಎನ್ ಎಯಿಂದ ಜಗತ್ತಿನಲ್ಲಿ ಹೊಸ ಜೀವ ಸೃಷ್ಟಿಸಬಹುದು ಎಂದು ಕಂಡು ಹಿಡಿದ ಕಾರಣಕ್ಕೆ ನೊಬೆಲ್ ಪ್ರಶಸ್ತಿ ದೊರೆತಿದೆ.

📡ಪೌಲ್ ಎಲ್ ಮಾಡ್ರಿಚ್ ಹೋವರ್ಡ್ ಹಗಿಸ್ ಮೆಡಿಕಲ್ ಇನ್ ಸ್ಟಿಟ್ಯೂಟ್ ಮತ್ತು ಡ್ಯೂಕ್ ವಿಶ್ವವಿದ್ಯಾಲಯ
    ಮೆಡಿಕಲ್ ಸೆಂಟರ್ ಡಿಎನ್ ಎ ಯನ್ನು ಆವರಿಸಿದ ಬೇಡವಾದ ಜೀವಕೋಶಗಳು ಕೋಶ ವಿಭಜನೆಯ ಸಮಯದಲ್ಲಿ ಹೇಗೆ ಮರು ರೂಪುಗೊಳ್ಳುತ್ತದೆ ಎಂದು ತೋರಿಸಿದಕ್ಕಾಗಿ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.

📡ಚಾಪೆಲ್ ಹಿಲ್ ನ ಉತ್ತರ ಕೆರೋಲಿನಾ ವಿಶ್ವವಿದ್ಯಾಲಯದ ಡಾ. ಅಜೀಜ್ ಸ್ಯಾನ್ಕಾರ್ ಯಾಂತ್ರಿಕ ಜೀವಕೋಶಗಳು ನೀಳಾತೀತ ಕಿರಣಗಳಿಂದ ಹಾನಿಗೊಳಗಾದ ಡಿಎನ್ ಎ ಯನ್ನು ಹೇಗೆ ಮರು ರೂಪಿಸುತ್ತದೆ ಎಂದು ನಕ್ಷೆ ತಯಾರಿಸಿದ ಕಾರಣ ನೊಬೆಲ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ
🌹🌹🌹🌹🌹🌹🌹🌹🌹

Monday 5 October 2015

ನೊಬೆಲ್ ಮಾಹಿತಿ

🌹ನೊಬೆಲ್ ಪ್ರಶಸ್ತಿಯ ಬಗ್ಗೆ ಒಂದಷ್ಟು ಮಾಹಿತಿ (ಜಿಕೆಮಣಿ) ಸ್ನೇಹಿತರಿಗಾಗಿ🌹
🌿🌿👏🏻📡👏🏻👏🏻📡🌿🌿
   ✨ (ರೋಷನ ಜಗಳೂರು)✨

👉🏿ನೊಬೆಲ್ ಪ್ರಶಸ್ತಿಯು 
ಅಲ್‌ಫ್ರೆಡ್ ನೊಬೆಲ್‌ರ ಮರಣೋತ್ತರ ಉಯಿಲಿನ ಪ್ರಕಾರ ವ್ಯಕ್ತಿಗಳ ಮತ್ತು ಸಂಘಸಂಸ್ಥೆಗಳ ಅತ್ಯುಚ್ಚ ಜನೋಪಕಾರಿ ಸಾಧನೆ, ಸಂಶೋಧನೆ, ಅವಿಷ್ಕಾರ ಮತ್ತು ಸೇವೆಗಳಿಗೆ ನೀಡಲ್ಪಡುತ್ತಿರುವ ಪುರಸ್ಕಾರ.

👉👉🏿ನೊಬೆಲ್ ಪ್ರಶಸ್ತಿಯನ್ನು ಜಗತ್ತಿನ ಅತ್ಯುಚ್ಚ ಸನ್ಮಾನ ಎಂದು ಪರಿಗಣಿಸಲಾಗಿದೆ. 

🌍ಪ್ರಶಸ್ತಿಯ ಇತಿಹಾಸ🌍

👉🏿ಆಲ್ಫ್ರೆಡ್ ನೋಬೆಲ್ 'ಡೈನಮೈಟ್' ವಿಸ್ಪೋಟಕವನ್ನು ಆವಿಷ್ಕರಿಸಿದಾತ. ಈ ವಿಸ್ಪೋಟಕವು ಯುದ್ದಗಳಲ್ಲಿ ಹೆಚ್ಚಾಗಿ ಬಳಕೆಯಾದರಿಂದ ಈತನು ಅಪಾರ ಸಂಪತ್ತನ್ನು ಗಳಿಸಿದ. ಆದರೆ ತನ್ನಿಂದ ಕಾರಣವಾದ ಸಾವು - ನೋವುಗಳಿಂದ ವಿಚಲಿತಗೊಂಡು, 1895ರಲ್ಲಿ ತನ್ನ ಸಂಪತ್ತಿನ 94% ಭಾಗವನ್ನು ಈ ಪ್ರಶಸ್ತಿಗಳ ಸ್ತಾಪನೆಗೆ ಉಯಿಲಿನಲ್ಲಿ ನಮೂದಿಸಿದ.
ಈ ಪ್ರಕಾರವಾಗಿ 1901ರಲ್ಲಿ ಮೊದಲ ನೊಬೆಲ್ ಪ್ರಶಸ್ತಿಗಳನ್ನು ವಿತರಿಸಲಾಯಿತು.

🎩ವಿವಿಧ ಪುರಸ್ಕಾರಗಳು🎩

👉🏿ಭೌತಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿ 
(ಪದಕಕ್ಕೆ ಅರ್ಹತೆಯನ್ನು ರಾಯಲ್ ಸ್ವೀಡಿಷ್ ವಿಜ್ಞಾನ ಅಕಾಡೆಮಿಯು ನಿರ್ಧರಿಸುತ್ತದೆ.)

👉🏿ರಸಾಯನಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿ 
(ಪದಕಕ್ಕೆ ಅರ್ಹತೆಯನ್ನು ರಾಯಲ್ ಸ್ವೀಡಿಷ್ ವಿಜ್ಞಾನ ಅಕಾಡೆಮಿಯು ನಿರ್ಧರಿಸುತ್ತದೆ.)

👉🏿ವೈದ್ಯಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿ 
(ಪದಕಕ್ಕೆ ಅರ್ಹತೆಯನ್ನು ಕ್ಯಾರೋಲಿನ್‌ಸ್ಕಾ ಸಂಸ್ಥೆಯು ನಿರ್ಧರಿಸುತ್ತದೆ.)

👉🏿ಸಾಹಿತ್ಯದಲ್ಲಿ ನೊಬೆಲ್ ಪ್ರಶಸ್ತಿ 
(ಪದಕಕ್ಕೆ ಅರ್ಹತೆಯನ್ನು ರಾಯಲ್ ಸ್ವೀಡಿಷ್ ವಿಜ್ಞಾನ ಅಕಾಡೆಮಿಯು ನಿರ್ಧರಿಸುತ್ತದೆ.)

👉🏿ನೊಬೆಲ್ ಶಾಂತಿ ಪ್ರಶಸ್ತಿ 
(ಪದಕಕ್ಕೆ ಅರ್ಹತೆಯನ್ನು ನಾರ್ವೆಯ ಸಂಸತ್ತು ನೇಮಕ ಮಾಡಿದ ನಾರ್ವೆಯ ನೊಬೆಲ್ ಸಮಿತಿಯು ನಿರ್ಧರಿಸುತ್ತದೆ.)

👉🏿ಆಲ್‌ಫ್ರೆಡ್ ನೊಬೆಲ್ ಅವರ ಸ್ಮರಣೆಗಾಗಿ ಬ್ಯಾಂಕ್ ಆಫ್ ಸ್ವೀಡನ್ ನೀಡುವ ಅರ್ಥಶಾಸ್ತ್ರ ಪ್ರಶಸ್ತಿ
(ಪದಕಕ್ಕೆ ಅರ್ಹತೆಯನ್ನು ರಾಯಲ್ ಸ್ವೀಡಿಷ್ ವಿಜ್ಞಾನ ಅಕಾಡೆಮಿಯು ನಿರ್ಧರಿಸುತ್ತದೆ.) 👉🏿👇🏿
(ಇದನ್ನು ಅರ್ಥ ಶಾಸ್ತ್ರದ ನೊಬೆಲ್ ಪ್ರಶಸ್ತಿ ಎಂದು ಪರಿಗಣಿಸಿದರೂ, ಇದು ಆಲ್‌ಫ್ರೆಡ್ ನೊಬೆಲ್ ಅವರ ಉಯಿಲಿನಲ್ಲಿರಲಿಲ್ಲ. ಈ ಪುರಸ್ಕಾರವನ್ನು 1969ರಲ್ಲಿ ಬ್ಯಾಂಕ್ ಆಫ್ ಸ್ವೀಡನ್ ಪ್ರಾರಂಭ ಮಾಡಿತು.)

🌿🌹ನೊಬೆಲ್ ಪ್ರಶಸ್ತಿ ಪಡೆದ ಭಾರತೀಯರು🌹🌿

🌹 ರವೀಂದ್ರನಾಥ ಠಾಗೋರ್ - ಸಾಹಿತ್ಯದಲ್ಲಿ (1913) 
🌹ಸರ್. ಸಿ. ವಿ. ರಾಮನ್ - ಭೌತಶಾಸ್ತ್ರದಲ್ಲಿ (1930)
 🌹 ಹರಗೋಬಿಂದ್ ಖೊರಾನ - ವೈದ್ಯಶಾಸ್ತ್ರದಲ್ಲಿ (೧೯೬೮)
🌹ಮದರ್ ತೆರೇಸಾ - ಶಾಂತಿ ಪ್ರಶಸ್ತಿ (೧೯೭೯) 
🌹ಸುಬ್ರಮಣ್ಯಮ್ ಚಂದ್ರಶೇಖರ್ - ಭೌತಶಾಸ್ತ್ರದಲ್ಲಿ (೧೯೮೩)
🌹ಅಮರ್ತ್ಯ ಸೇನ್ - ಅರ್ಥಶಾಸ್ತ್ರದಲ್ಲಿ (೧೯೯೮) 

🌹ಡಾ. ರಾಜೇಂದ್ರಕುಮಾರ್ ಪಚೌರಿ-'ಪರಿಸರ ಸಂರಕ್ಷಣೆಗಾಗಿ,' 'ನೋಬೆಲ್ ಶಾಂತಿಪ್ರಶಸ್ತಿ' (೨೦೦೭)
🌹ವೆಂಕಟರಾಮನ್ ರಾಮಕೃಷ್ಣನ್, ರಸಾಯನಶಾಸ್ತ್ರದಲ್ಲಿ (೨೦೦೯)

ಕೈಲಾಸ್ ಸತ್ಯಾರ್ಥಿ - ಶಾಂತಿ (2014)

ಗಾಂಧಿವಾದಿಯಾಗಿರುವ ಸತ್ಯಾರ್ಥಿ ಅವರು ಏಕಾಂಗಿ ವೀರನಂತೆ 'ಬಚಪನ್ ಬಚಾವೋ' ಸರಕಾರೇತರ ಸ್ವಯಂ ಸೇವಾ ಸಂಸ್ಥೆಯ ಮೂಲಕ ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಮಕ್ಕಳ ಕಳ್ಳಸಾಗಣೆ ನಿಯಂತ್ರಣದ ಕುರಿತು ನಿರಂತರವಾಗಿ ಶಾಂತಿಯುತ ಹೋರಾಟ ನಡೆಸಿಕೊಂಡು ಬರುತ್ತಿದ್ದು, ಶೋಷಿತರ ಧ್ವನಿಯಾಗಿ ನಿಂತಿದ್ದಾರೆ.ಮಹಾತ್ಮನ ಅಹಿಂಸಾ ಹೋರಾಟದ ಪರಂಪರೆಯನ್ನು ಅವರು ಮುಂದವರಿಸಿಕೊಂಡು ಬಂದಿದ್ದು, ಪ್ರತಿಭಟನೆ ಹಾಗೂ ಜಾಗೃತಿ ಶಿಬಿರಗಳನ್ನು ನಡೆಸಿದ್ದಾರೆ. ಮಕ್ಕಳ ಹಕ್ಕುಗಳ ಪ್ರಮುಖ ಅಂತಾರಾಷ್ಟ್ರೀಯ ಸಮ್ಮೇಳನಗಳಲ್ಲಿ ಪಾಲ್ಗೊಂಡು ತಮ್ಮ ವಿಚಾರಧಾರೆ ಹಂಚಿ ಕೊಂಡಿದ್ದಾರೆ.ಭಾರತದ ಕೈಲಾಶ್ ಸತ್ಯಾರ್ಥಿ ಹಾಗೂ ಪಾಕಿಸ್ತಾನದಲ್ಲಿ ಹೆಣ್ಣುಮಕ್ಕಳ ಹಕ್ಕುಗಳಿಗಾಗಿ ಹೋರಾಡಿದ ಮಲಾಲ ಅವರಿಗೆ ಪಾಕ್‌`ನ ಮಲಾಲಾ ಯೂಸುಫ್ ಝಾಯಿ ಅವರಿಗೆ ೨೦೧೪ ರ ನೊಬೆಲ್ ಶಾಂತಿ ಪುರಸ್ಕಾರ ನೀಡಿದೆ. ತಾಲಿಬಾನ್‌ ಉಗ್ರರ ದಾಳಿಗೆ ಸಿಲುಕಿ ಬಚಾವಾಗಿದ್ದ ಮಲಾಲ ಯೂಸುಫ್ ಝಾಯಿ ನೊಬೆಲ್‌ ಪಡೆದ ಅತಿ ಕಿರಿಯ ವ್ಯಕ್ತಿ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

🌹🌹🌹🌹🌹🌹🌹🌹🌹      🌹ರೋಷನ್ ಜಗಳೂರು🌹

2015 ನೋಬೆಲ್

BREAKING NEWS
🌹2015ರ ನೋಬೆಲ್ ಪ್ರಶಸ್ತಿ🌹

ವೈದ್ಯವಿಜ್ಞಾನ ಕ್ಷೇತ್ರದ
ಕೊಡುಗೆಗಾಗಿ ಐರಿಷ್ ಮೂಲದ
👉ವಿಲಿಯಂ ಕ್ಯಾಂಪ್ಬೆಲ್,
👉ಜಪಾನ್ ಸತೋಶಿ
ಒಮುರಾ ಮತ್ತು
👉ಚೀನಾದ ಯುಯು ಟು
ಅವರಿಗೆ 2015ನೇ ಸಾಲಿನ ನೊಬೆಲ್
ಪುರಸ್ಕಾರ ಘೋಷಿಸಲಾಗಿದೆ.

📡‘ವೈದ್ಯವಿಜ್ಞಾನ ಕ್ಞೇತ್ರದಲ್ಲಿನ
ಗಣನೀಯ ಕೊಡುಗೆಗಾಗಿ ಈ
ಮೂವರನ್ನು ನೊಬೆಲ್ ಪುರಸ್ಕಾರಕ್ಕೆ
ಆಯ್ಕೆ ಮಾಡಲಾಗಿದೆ’ ಎಂದು ಆಯ್ಕೆ ಸಮಿತಿ
ಹೇಳಿದೆ.
🌹🌍🌍🌹🌍🌍🌹🌹🌍

Thursday 1 October 2015

FREEGKSMS

🌿🌿🌿🌿🌿🌿🌿
2015 Right Livelihood Awards goes to Human Rights Activists:

Human rights and global crisis activists from Canada, Italy, Uganda, and the Marshall Islands have been named winners of the 2015 Right Livelihood Awards, the so-called " alternative Nobels." This year's 3 million kronor ($358,500) award will be shared by,

Canada's Sheila Watt-Cloutier, cited for promoting Inuit livelihoods and culture
Kasha Jacqueline Nabagesera from Uganda, for her struggle for gay rights and sexual minorities
Italian surgeon Gino Strada, for providing medical assistance to victims of war.
The people of the Pacific islands and their foreign minister, Tony de Brum, will receive an honorary award for what was described as their visionary and courageous legal action against nuclear powers "for failing to honor disarmament obligations."

Points to Note

The awards were founded in 1980 by Swedish-German philanthropist Jakob von Uexkull.
Jakob Johann Baron von Uexküll (8 September 1864 – 25 July 1944) was a Baltic German biologist who worked in the fields of muscular physiology, animal behaviour studies, and the cybernetics of life.
The Right Livelihood Award is an international award to "honour and support those offering practical and exemplary answers to the most urgent challenges facing us today.
Although it is promoted as an "Alternative Nobel Prize", it is not a Nobel prize

Wednesday 23 September 2015

ಮೀಸಲಾತಿ

📡ಕರ್ನಾಟಕ ರಾಜ್ಯ ಸರ್ಕಾರದ ಎಲ್ಲಾ ನೇಮಕಾತಿಗಳಲ್ಲಿ ಪ್ರವರ್ಗವಾರು ಮೀಸಲಾತಿ ನೀಡುವ ಬಗ್ಗೆ ಕೈಗೊಂಡ ತೀರ್ಮಾನ📡
🌷ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಶೇ. 50 ಕ್ಕಿಂತ ಹೆಚ್ಚು ಇರದಂತೆ ಕಾನೂನು ರಚಿಸಬೇಕೆಂದು ಸುಪ್ರಿಂಕೋರ್ಟ್ ಸೆಪ್ಟೆಂಬರ್ 9, 1994 ರಂದು ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ಕೊಟ್ಟಿತು. ಆದ್ದರಿಂದ ಕರ್ನಾಟಕ ಸರ್ಕಾರ 1995 ರ ಫೆಬ್ರವರಿಯಲ್ಲಿ ಶೇಕಡ 50 ರಷ್ಟು ಪ್ರಮಾಣದ ಮೀಸಲಾತಿ ನಿಯಮವನ್ನು ಜಾರಿಗೆ ತಂದಿತು. ಸಚಿವರಾಗಿದ್ದ ಎಂ. ಪಿ. ಪ್ರಕಾಶ್ ಅಧ್ಯಕ್ಷತೆಯಲ್ಲಿ ರಚನೆಯಾಗಿದ್ದ ಮಂತ್ರಿಮಂಡಲದ ಉಪಸಮಿತಿಯ ಶಿಫಾರಸ್ಸಿನ ಆಧಾರದ ಮೇಲೆ ಈ ನಿಯಮವನ್ನು ಜಾರಿಗೊಳಿಸಲಾಯಿತು. ಪ್ರವರ್ಗವಾರು ಮೀಸಲಾತಿ ಈ ಕೆಳಕಂಡಂತೆ ಇದೆ. [ಸಂವಿಧಾನದ 15 (4) ಮತ್ತು  16 (4)  ವಿಧಿಗಳ ಅನ್ವಯ] 👇🏻👇🏻👇🏻
🌴ವರ್ಗ 1👉🏼  4%
🌴ವರ್ಗ 2A 👉🏼15%
🌴ವರ್ಗ 2B👉🏼  4%
🌴ವರ್ಗ 3A 👉🏼4%
🌴ವರ್ಗ 3B 👉🏼 5%
🌴ಪರಿಶಿಷ್ಟ ಜಾತಿ  👉🏼15%
🌴ಪರಿಶಿಷ್ಟ ಪಂಗಡ 👉🏼3%
ಅಲ್ಲದೆ ಈ ಕೆಳಕಂಡವರಿಗೆ ಮೀಸಲು ಸೌಲಭ್ಯಗಳು ಇರಬಾರದೆಂದು ತಿಳಿಸಿದೆ.
🌹ಉನ್ನತ ಹುದ್ದೆಯಲ್ಲಿರುವವರ ಮಕ್ಕಳು.
🌹ವೈದ್ಯರು,  ವಕೀಲರು, ಚಾರ್ಟಡ್ ಅಕೌಂಟೆಂಟ್,  ಇನ್ ಕನ್ನಡ ಟ್ಯಾಕ್ಸ್ ಕನ್ಸಲ್ಟೆಂಟ್ಸ್, ಇಂಜಿನಿಯರ್ ಗಳು- ಇವರ ಮಕ್ಕಳು.
🌹ಪದವೀಧರ ತಂದೆ/ ತಾಯಿಗಳ ಮಕ್ಕಳು.
🌹ಆದಾಯ ತೆರಿಗೆ  ಕೊಡುವ ತಂದೆ / ತಾಯಿಯ ಮಕ್ಕಳು.
🌹 ವ್ಯಾಪಾರ ತೆರಿಗೆ ಕೊಡುವ ತಂದೆ / ತಾಯಿಯ ಮಕ್ಕಳು.
🌹ಎಂಟು ಹೆಕ್ಟೇರ್ ಗಿಂತ ಹೆಚ್ಚು ವ್ಯವಸಾಯ ಭೂಮಿಯನ್ನು ಹೊಂದಿರುವವರ ಮಕ್ಕಳು.
(ಮಾಹಿತಿ ಅರುಲ್ ಡಿಸೋಜಾ)

ಕೋರ್ಟ್ ಚಲನಚಿತ್ರ

🌹🌹🌹🌹🌹🌹
ಮುಂಬೈ: ರಾಷ್ಟ್ರೀಯ ಚಲನಚಿತ್ರ
ಪ್ರಶಸ್ತಿ ಪಡೆದ ಮರಾಠಿ ಭಾಷೆಯ 'ಕೋರ್ಟ್' ಚಿತ್ರ
ಆಸ್ಕರ್ ಚಲನಚಿತ್ರ ಸ್ಪರ್ಧೆಗೆ
ನಾಮನಿರ್ದೆಶನಗೊಂಡಿದೆ.
ಅಮೋಲ್ ಪಾಲೇಕರ್ ನೇತೃತ್ವದ 17 ಸದಸ್ಯರ
ತಂಡ 'ಕೋರ್ಟ್' ಚಿತ್ರವನ್ನು ಆರಿಸಿದೆ. ವಿದೇಶ
ಭಾಷೆಗಳ ವರ್ಗದಲ್ಲಿ ಈ ಚಿತ್ರ ಸ್ಪರ್ಧಿಸಲಿದೆ.
ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿ
ಲೋಪ ದೋಷಗಳನ್ನು ತೋರಿಸುವ ಕಥೆ ಕೋರ್ಟ್ ಚಿತ್ರದಲ್ಲಿದೆ.
ಚೈತನ್ಯ ತಾಮ್ನೆ ಬರೆದು ನಿರ್ದೇಶನದ ಈ
ಚಿತ್ರವನ್ನು ವಿವೇಕ್ ಗೊಂಬರ್
ನಿರ್ಮಿಸಿದ್ದಾರೆ. ಕೋರ್ಟ್ ಚಿತ್ರಕ್ಕೆ 62ನೇ
ರಾಷ್ಟ್ರೀಯ ಚಲನ ಚಿತ್ರ ಪ್ರಶಸ್ತಿ ಸಹ
ಸಕ್ಕಿತ್ತು. 116 ನಿಮಿಷದ ಈ ಚಿತ್ರ ಮರಾಠಿ ಅಲ್ಲದೇ
ಹಿಂದಿ, ಗುಜರಾತಿ, ಇಂಗ್ಲಿಷ್ ಭಾಷೆಗೆ ಡಬ್
ಆಗಿದೆ.

ಚಾಬಹಾರ್‍ ಬಂದರು

🌿🌿🌿🌿🌿🌿🌿🌿
ಚಾಬಹಾರ್‌ ಯೂರಿಯಾ ಘಟಕ: ಭಾರತ 1 ಲಕ್ಷ ಕೋಟಿ ಹೂಡಿಕೆ
(ಪ್ರಜಾವಾಣಿ)

ನವದೆಹಲಿ (ಪಿಟಿಐ): ಭಾರತವು ಪರ್ಷಿಯನ್‌ ಕೊಲ್ಲಿಯ  ಚಾಬಹಾರ್‌ ಬಂದರಲ್ಲಿ ನಿರ್ಮಿಸಲು ಉದ್ದೇಶಿಸಿರುವ  ಯೂರಿಯಾ ತಯಾರಿಕಾ ಘಟಕಕ್ಕೆ ಪ್ರತಿ ಬ್ರಿಟೀಷ್‌ ಥರ್ಮಲ್‌ ಯುನಿಟ್‌ಗೆ (ಬಿಟಿಯು) 2.95 ಡಾಲರ್‌ (ಅಂದಾಜು 192 ರೂ) ದರದಲ್ಲಿ ನೈಸರ್ಗಿಕ ಅನಿಲ ಪೂರೈಸಲು ಸಿದ್ಧವಿರುವುದಾಗಿ ಇರಾನ್‌ ಹೇಳಿದೆ.

1 ಬಿಟಿಯು 1055 ಜೌಲ್‌ಗೆ ಸಮ. ಆದರೆ, ಈ ದರವನ್ನು ಇನ್ನಷ್ಟು  ಅಂದರೆ 1.5 ಡಾಲರ್‌ಗಳಿಗೆ ತಗ್ಗಿಸುವಂತೆ ಭಾರತ ಇರಾನ್‌ಗೆ ಮನವಿ ಮಾಡಿದೆ. ಇರಾನ್‌ ಮುಂದಿಟ್ಟಿರುವ ಈ ದರವು ಸದ್ಯ  ಭಾರತ ಆಮದು ಮಾಡಿಕೊಳ್ಳುತ್ತಿರುವ ನೈಸರ್ಗಿಕ ಅನಿಲ ದರಕ್ಕೆ ಹೋಲಿದರೆ ಅರ್ಥದಷ್ಟು ಕಡಿಮೆ ಇದೆ.

ಇರಾನ್‌  ಪರಮಾಣು ಕಾರ್ಯಕ್ರಮದ ಮೇಲೆ ಅಮೆರಿಕ ಮತ್ತು ಪಶ್ಚಿಮ ದೇಶಗಳು ಹೇರಿರುವ ನಿರ್ಬಂಧದ ನಡುವೆಯೂ ಭಾರತ ಚಾಬಹಾರ್‌ ಬಂದರಿನಲ್ಲಿ ಸುಮಾರು 1 ಲಕ್ಷ ಕೋಟಿ ಹೂಡಿಕೆಯಲ್ಲಿ ಯೂರಿಯಾ ತಯಾರಿಕಾ ಘಟಕ ಸ್ಥಾಪಿಸಲು ಉದ್ದೇಶಿಸಿದೆ. ಈ ಘಟಕದಿಂದ ಭಾರತದಲ್ಲಿ ಯೂರಿಯಾ ದರ ಶೇ 50ರಷ್ಟು ಕಡಿಮೆಯಾಗಲಿದೆ. ಯೂರಿಯಾ ಸಬ್ಸಿಡಿ ಹೊರೆಯೂ ಗನನೀಯವಾಗಿ ತಗ್ಗಲಿದೆ. ಇದಕ್ಕಾಗಿ ಟೆಹರಾನ್‌ ಜತೆಗೆ  ಮಾತುಕತೆ ಮುಂದುವರಿದಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಚಾಬಹಾರ್‌ ಬಂದರು ಆಘ್ಫಾನಿಸ್ತಾನ ಮತ್ತು ಪಾಕಿಸ್ತಾನದ ಸಮುದ್ರ ಮಾರ್ಗದ ಆಯಕಟ್ಟಿನ ಪ್ರದೇಶದಲ್ಲಿದೆ.

ಚಾಬಹಾರ್‌ನಲ್ಲಿ ಯೂರಿಯಾ ಘಟಕ ಸ್ಥಾಪಿಸಲು ನಿರ್ಧರಿಸಲಾಗಿದೆ. ಆದರೆ,  ಇರಾನ್‌ ಪೂರೈಸಲಿರುವ ನೈಸರ್ಗಿಕ ಅನಿಲ ದರದ ಮೇಲೆ ಈ ಯೋಜನೆ ಅವಲಂಬಿತವಾಗಿದೆ ಎಂದು ಗಡ್ಕರಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

🐍🐍🐍🐍🐍🐍🐍🐍
gkmani2u ROSHAN
🐔🐔🐔🐔🐔🐔🐔🐔

Friday 11 September 2015

ಉದ್ಯೋಗಮಣಿ

🌹ಉದ್ಯೋಗಮಣಿ🌹
📡📡📡📡📡📡📡
🎤ಕೃಷಿ ವಿಶ್ವವಿದ್ಯಾಲಯ ಧಾರವಾಡ. 👇
    ನೇಮಕಾತಿ ಅಧಿಸೂಚನೆ
63 ಸಹಾಯಕ/ ಸಹಾಯಕ ಕಮದ ಕ‍ಂಪ್ಯೂಟರ್‍ ಆಪರೇಟರ್‍ ಹುದ್ದೆಗ‌ಳ ನೇಮಕಾತಿಗೆ ಅರ್ಜಿ ಆಹ್ವಾನ..👆👇

ಹೆಚ್ಚಿನ ಮಾಹಿತಿಗಾಗಿ

www.uasd.edu
🍂🍂🍂🍂🍂🍂🍂📡

ಉದ್ಯೋಗಮಣಿ

🌹🌹ಉದ್ಯೋಗಮಣಿ🌹🌹

📡📡ಚಾಮರಾಜನಗರ ವೈದ್ಯಕೀಯ ವಿಜ್ಙಾನಗಳ ಸಂಸ್ಥೆ📡📡

95 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ,

ಹೆಚ್ಚಿನ ಮಾಹಿತಿಗಾಗಿ ಇಮೇಜ್ ನಲ್ಲಿರುವ ವೆಬ್ ಸೈಟ್ ಗೆ ಭೇಟಿ ಕೊಡಿ📡📡📡🌹🍂

ಪ್ರಚಲಿತ..ಜ್ಙಾನ

🍂🍂🍂🍂🍂🍂🍂🍂
✏ರೋಷನ್ ಜಗಳೂರು
          (ಜಿಕೆಮಣಿ)
🌹🌹🌹🌹📙🌹🌹🌹🌹

🍂"ಬರಾಕ್ 8" ಕ್ಷಿಪ್ಪಣಿಯನ್ನು ಯಾವ ಎರಡು ದೇಶಗಳು ಜಂಟಿಯಾಗಿ ನಿರ್ಮಿಸಿವೆ?
👉ಭಾರತ ಇಸ್ರೇಲ್

🍂ಇತ್ತೀಚೆಗೆ ಸ್ಥಾಪಿಸಲಾದ 'ನವಚಾರಕಕ್ಷಾ' ಎಂ‍ಬ ನೂತನ ಸಂಗ್ರಾಹಲಯ ಇರುವುದು?
👉ರಾಷ್ಟ್ರಪತಿ ಭವನ ದೆಹಲಿ

🍂ಆಗಸ್ಟ್ 7 ರಾಷ್ಟ್ರೀಯ ಕೈ ಮಗ್ಗ ದಿನವಾಗಿದೆ

🍂ಈಶೋಲಿ ಬ್ಯಾಕ್ಟೀರಿಯ ಎಲ್ಲಿ ಕ‍ಂಡು ಬರುತ್ತದೆ?
👉ಮಾನವನ ಕರುಳಿನಲ್ಲಿ

🍂ಮೂತ್ರ ಜನಕಾಂದಲ್ಲಿರುವ ಕಲ್ಲುಗಳಿಗೆ ಕಾರಣವಾದ ಲವಣಗಳು?
👉ಕ್ಯಾಲ್ಸಿಯಂ ಅಕ್ಸಲೇಟ್

🍂ರಿಗೆಲ್ ಎಂಬ ನಕ್ಷತ್ರ ನೀಲಿ ಮಿಶ್ರಿತ ಬೆಳಕು ಬಣ್ಣದಾಗಿ ಕಾಣುತ್ತದೆ ಇದಕ್ಕೆ ಕಾರಣ?
👉ಅದರ ಮೇಲ್ಮೈ ತಾಪ ಬಹಳ ಹೆಚ್ಚಾಗಿರುವುದರಿಂದ

🍂ಮಂದಾ ಎಂಬ ಹಬ್ಬವನ್ನು ಆಚರಿಸುವ ಬುಡಕಟ್ಟು ಜನಾಂಗ ಯಾವ ರಾಜ್ಯದವರು?
👉ಜಾರ್ಖಂಡ್

🍂￿ಅಂಬ್ರೆಲಾ ಕ್ರಾಂತಿ ಇದು ಹಾಂಗಾಂಕ್ ನಲ್ಲಿ ನಡೆಯಿತು (ಚೀನಾದ ವಿರುದ್ದ ನಡೆದ ಪ್ರಜಾಪ್ರಭುತ್ವ ಚಳುವಳಿಯಾಗಿದೆ)

🍂7ನೇ ಬ್ರಿಕ್ಸ್ ಶೃಂಗ ಸಭೆ ನಡೆದದ್ದು ರಷ್ಯಾದ ಉಫಾ ನಗರದಲ್ಲಿ (ಜುಲೈ  8, 9 2015)

🍂ಗುಪ್ತರ ಕಾಲದಲ್ಲಿ ಹೊರಡಿಸಿದ ಬೆಳ್ಳಿ ನಾಣ್ಯದ ಹೆಸರು?
👉ರೂಪಕ

🍂ತಾಯಿ ಭುವನೇಶ್ವರಿ ಎಂಬ ಕವಿತೆಯನ್ನು ರಚಿಸಿದವರು?
👉ಅಂದಾನಪ್ಪ ದೊಡ್ಡಮೇಟಿ

🍂ವೃದ್ದ ಗಂಗೆ ಎಂದು ಗೋದಾವರಿ ನದಿಯನ್ನು ಕರೆಯುವರು

🍂ಕೇಂದ್ರಾಡಳಿತ ಪ್ರದೇಶಗಳಿಂದ ಚುನಾಯಿತರಾಗುವ ಲೋಕಸಭಾ ಸದಸ್ಯರ ಸಂಖ್ಯೆ?
👉13

🍂ಮೊಟೆರಾ ಸ್ಟೇಡಿಯಂ ಕಂಡು ಬರುವ ನಗರ?
👉ಅಹಮದಬಾದ್

🍂ಚುಂಚು ಎಂಬ ಬುಡಕಟ್ಟು ಜನಾಂಗ ಕಂಡುಬರುವ ರಾಜ್ಯ?
👉ಒಡಿಶಾ
🍂🙏🙏🍂🙏🍂🙏🍂
ರೋಷನ್ ಜಗಳೂರು

Saturday 1 August 2015

ವಿಶ್ವ ಸ್ನೇಹಿತರ ದಿನ

🍂🍂🍂🍂🍂🍂🍂🍂
gkmani2u Roshan
🍂🍂🍂🍂🍂🍂🍂🍂

👬👬👬ವಿಶ್ವ ಸ್ನೇಹಿತರ ದಿನ: ಕುತೂಹಲ ಕೆರಳಿಸುವ ಇಂಟರೆಸ್ಟಿಂಗ್ ಕಹಾನಿ! 👬👬

👉 ನಿಷ್ಕಲ್ಮಷ ಸಂಬಂಧಕ್ಕೆ ಮತ್ತೊಂದು ಹೆಸರೇ ಸ್ನೇಹ. ಯಾವುದೇ ಸಂಬಂಧಗಳು ಮುರಿದು ಬಿದ್ದರೂ ಸ್ನೇಹ ಮಾತ್ರ ಕೊನೇ ತನಕ ಗಟ್ಟಿಯಾಗಿರುತ್ತದೆ. ಅದರ ಶಕ್ತಿಯೇ ಹಾಗೆ. ಸ್ನೇಹಿತರು ಯಾವುದೇ ಕಾರಣಗಳಿಂದ ದೂರಾದರೂ ಯಾವತ್ತಾದರೂ ಅವರ ಸ್ನೇಹ ಮತ್ತೆ ಒಂದಾಗುತ್ತದೆ. ಇಂದಿನ ಆಧುನಿಕ ಯುಗದಲ್ಲಿ ವಿವಿಧ ಸಾಮಾಜಿಕ ಜಾಲತಾಣಗಳ ಮೂಲಕ ಸ್ನೇಹವು ಚಿರಾಯುವಾಗಿದೆ.
👉ಸ್ನೇಹಿತರ ಬಗ್ಗೆ ತಮಗಿರುವ ಕಾಳಜಿ ವ್ಯಕ್ತಪಡಿಸುವ ಸಲುವಾಗಿ ವಿಶ್ವದೆಲ್ಲೆಡೆಯಲ್ಲಿ ಸ್ನೇಹಿತರ ದಿನವನ್ನು ಆಚರಿಸಲಾಗುತ್ತದೆ. ಸ್ನೇಹಿತರ ದಿನ, ಅದರ ಮೂಲ, ಅದು ಹೇಗೆ ಆರಂಭವಾಯಿತು, ವಿವಿಧ ದೇಶಗಳಲ್ಲಿ ಅದನ್ನು ಹೇಗೆ ಆಚರಿಸಲಾಗುತ್ತದೆ ಹಾಗೂ ಮತ್ತಿತರ ಕೌತುಕದ ವಿಷಯಗಳನ್ನು ಈ ಲೇಖನವು ನಿಮ್ಮ ಮುಂದಿಡಲಿದೆ.
👉ಸ್ನೇಹದ ಬಗ್ಗೆ ಸಾವಿರಾರು ವರ್ಷಗಳಿಂದ ಚರ್ಚೆ ನಡೆಸಲಾಗುತ್ತಿದೆ. ನಂಬಿಕೆ, ಪ್ರೋತ್ಸಾಹ, ಸಂವಹನ, ಪ್ರಾಮಾಣಿಕತೆ, ತಿಳುವಳಿಕೆ, ಕರುಣೆಯನ್ನು ಒಳಗೊಂಡಿರುವಂತಹ ಅತ್ಯಂತ ದೃಢ ಸಂಬಂಧವೇ ಸ್ನೇಹ.
👉ಸ್ನೇಹಿತರ ಬಗ್ಗೆ ಕಾಳಜಿ ಮತ್ತು ಪ್ರೀತಿ ವ್ಯಕ್ತಪಡಿಸಲು ಯಾವುದೇ ವಿಶೇಷ ದಿನ ಬೇಕೆಂದಿಲ್ಲ. ಆದರೆ ಸ್ನೇಹಿತರ ದಿನವು ನಿಮ್ಮ ಸ್ನೇಹಿತರ ಬಗ್ಗೆ ಹೆಚ್ಚಿನ ಕಾಳಜಿ ಮತ್ತು ಗೌರವ ತೋರಿಸುವಂತಹ ಒಂದು ಅವಕಾಶವನ್ನು ಒದಗಿಸುತ್ತದೆ.
👉ಈ ಜಗತ್ತಿನಲ್ಲಿ ಇನ್ನೂ ಗಟ್ಟಿಯಾಗಿ ಉಳಿದಿರುವ ಸಂಬಂಧವೆಂದರೆ ಅದು ಸ್ನೇಹ ಮಾತ್ರ. ಇದು ಅತ್ಯಂತ ವಿಶೇಷವಾಗಿರುಂತಹ ಆಕರ್ಷಣೆ ಮತ್ತು ನಂಬಿಕೆಯ ಸಂಬಂಧ. 👉ಸ್ನೇಹವೆಂದರೆ ನಮ್ಮ ಬಗ್ಗೆ ಕಾಳಜಿ ವಹಿಸುವ ಮತ್ತು ಕಷ್ಟದಲ್ಲಿ ಹೆಗಲು ಕೊಡುವಂತಹ ಒಂದು ಅಭೂತಪೂರ್ವ ಸಂಬಂಧ.
👉 ಸ್ನೇಹಿತರ ದಿನವನ್ನು ಮೊದಲು ಆರಂಭಿಸಿದವರು ಜಾಯ್ಸ್ ಹಾಲ್. 1919ರಲ್ಲಿ ಹಾಲ್ ಮಾರ್ಕ್ ಕಾರ್ಡ್ ಗಳನ್ನು ಸ್ಥಾಪಿಸಿದ ಈತ ಆಗಸ್ಟ್ ತಿಂಗಳ ಮೊದಲ ಭಾನುವಾರವನ್ನು ಜನರು ಸ್ನೇಹಿತರ ದಿನವಾಗಿ ಆಚರಿಸಬೇಕೆಂದು ಬಯಸಿ ಇದನ್ನು ಆರಂಭಿಸಿದ.

👉1958ರ ಜುಲೈ 20ರಂದು ಡಾ. ಅರ್ಟೆಮಿಯೊ ಬ್ರಾಚೊ ಎಂಬವರು ವಿಶ್ವ ಮಟ್ಟದಲ್ಲಿ ಸ್ನೇಹಿತರ ದಿನವನ್ನು ಆಚರಿಸಬೇಕೆಂಬ ಪ್ರಸ್ತಾಪವನ್ನಿಟ್ಟರು. ಪರಾಗ್ವೆಯ ಅಸುನಸಿಯೊನ್ ನಿಂದ 200 ಕಿ.ಮೀ. ಉತ್ತರದಲ್ಲಿರುವ ಪರಾಗ್ವೆ ನದಿಯ ನಗರದವಾದ ಪುರ್ಟೊ ಪಿನಾಸ್ಕೋದಲ್ಲಿ ತನ್ನ ಸ್ನೇಹಿತರೊಂದಿಗೆ ರಾತ್ರಿಯೂಟವನ್ನು ಮಾಡುತ್ತಿದ್ದ ಸಂದರ್ಭದಲ್ಲಿ ಬ್ರಾಚೋ ಅವರು ಈ ಪ್ರಸ್ತಾವವನ್ನಿಟ್ಟಿದ್ದರು.

👉2011 ಎಪ್ರಿಲ್ 27ರಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಜುಲೈ 30ನ್ನು ಅಂತಾರಾಷ್ಟ್ರೀಯ ಸ್ನೇಹಿತರ ದಿನವನ್ನಾಗಿ ಅಚರಿಸಬೇಕೆಂಬ ನಿರ್ಣಯ ಕೈಗೊಳ್ಳಲಾಯಿತು.
👉 ದಕ್ಷಿಣ ಅಮೆರಿಕಾದ ದಕ್ಷಿಣಭಾಗದ ಕೆಲವೊಂದು ರಾಷ್ಟ್ರಗಳಲ್ಲಿ ಈ ದಿನವನ್ನು ಆಚರಿಸಲಾಗುತ್ತದೆ. ಅದರಲ್ಲೂ ವಿಶೇಷವಾಗಿ ಪರಾಗ್ವೆಯಲ್ಲಿ ಇದನ್ನು ಆಚರಿಸಲಾಗುತ್ತದೆ. 👉1958ರಲ್ಲಿ ಜುಲೈ 30ನ್ನು ವಿಶ್ವ ಸ್ನೇಹಿತರ ದಿನವನ್ನಾಗಿ ಆಚರಿಸಲು ಪರಾಗ್ವೆ ಪ್ರಸ್ತಾವ ಮಾಡಿತ್ತು. ಸಾಂಪ್ರದಾಯಿಕವಾಗಿ ಆಗಸ್ಟ್‌ನ ಮೊದಲ ಭಾನುವಾರವನ್ನು ಸ್ನೇಹಿತರ ದಿನವನ್ನಾಗಿ ಆಚರಿಸಲಾಗುತ್ತದೆ. ಆದರೆ ಕೆಲವೊಂದು ರಾಷ್ಟ್ರಗಳಲ್ಲಿ ಸ್ನೇಹಿತರ ದಿನ ಆಚರಣೆಗೆ ಯಾವುದೇ ನಿಗದಿತ ದಿನವಿಲ್ಲ. ಗ್ರೀಟಿಂಗ್ ಕಾರ್ಡ್ ಕಂಪೆನಿಗಳಿಂದ ಆರಂಭವಾದಂತಹ ಈ ಆಚರಣೆಯು ಇಂದು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿನ ಆಸಕ್ತಿಯನ್ನು ಪಡೆದುಕೊಂಡು ರಜಾದಿನವನ್ನು ತುಂಬಾ ಆಸಕ್ತಿಯಿಂದ ಆಚರಿಸಲಾಗುತ್ತಿದೆ. ಅದರಲ್ಲೂ ಭಾರತ, ಬಾಂಗ್ಲಾದೇಶ ಮತ್ತು ಮಲೇಶಿಯಾದಲ್ಲಿ ಇದರ ಬಗ್ಗೆ ಆಸಕ್ತಿ ಬೆಳೆಯುತ್ತಿದೆ.

👉ಸ್ನೇಹಕ್ಕೇಕೆ ಶಾಸ್ತ್ರದ ಹಂಗು !! ದಕ್ಷಿಣ ಏಶ್ಯಾದಲ್ಲಿ ರಜಾದಿನವನ್ನು ಪ್ರಚುರ ಮಾಡುವವರು 1935ರಲ್ಲಿ ಅಮೆರಿಕಾದಲ್ಲಿ ನೆಲೆಸಿರುವಂತಹ ತಮ್ಮ ಸ್ನೇಹಿತರಿಗಾಗಿ ಈ ದಿನವನ್ನು ಅರ್ಪಿಸುವ ಸಂಪ್ರದಾಯವನ್ನು ಬೆಳೆಸಿಕೊಂಡಿದ್ದಾರೆ. ಆದರೆ ಇದರ ನಿಜವಾದ ವರ್ಷ 1919.
👉ಸ್ನೇಹಿತರ ದಿನದಂದು ಉಡುಗೊರೆ, ಕಾರ್ಡ್ ಮತ್ತು ಕೈಗೆ ರಿಬ್ಬನ್‌ನಂತಹ ಪಟ್ಟಿಗಳನ್ನು ಧರಿಸುವುದು ಸಾಮಾನ್ಯವಾಗಿ ಆಚರಿಸಿಕೊಂಡಿರುವಂತಹ ಸಂಪ್ರದಾಯ.
👉 1935ರಲ್ಲಿ ಅಮೆರಿಕಾದ ಕಾಂಗ್ರೆಸ್ ಆಗಸ್ಟ್ ತಿಂಗಳ ಮೊದಲ ಭಾನುವಾರವನ್ನು ರಾಷ್ಟ್ರೀಯ ಸ್ನೇಹಿತರ ದಿನವನ್ನಾಗಿ ಘೋಷಿಸಿತು. ಸ್ನೇಹಿತರಿಗೆ ಗೌರವ ಸೂಚಿಸುವ ಸಲುವಾಗಿ ರಾಷ್ಟ್ರೀಯ ರಜೆಯನ್ನು ಘೋಷಿಸಿದೆ. ಮಹಿಳೆಯರ ಸ್ನೇಹಿತರ ದಿನವನ್ನು ಸಪ್ಟೆಂಬರ್ ತಿಂಗಳ ಮೂರನೇ ಭಾನುವಾರದಂದು ಆಚರಿಸಲಾಗುತ್ತದೆ. ಪ್ರತಿಯೊಬ್ಬರು ಸ್ನೇಹಿತರ ದಿನವನ್ನು ಆಚರಿಸಿದರೆ ಬೆಸ್ಟ್ ಫ್ರೆಂಡ್ಸ್ ಅನಿಮಲ್ ಸೊಸೈಟಿಯು ಉತ್ತಮ ಸ್ನೇಹಿತರ ವಾರವನ್ನು ಆಚರಿಸುತ್ತಾ ಬಂದಿದೆ. ಅದು ಪ್ರತೀ ವರ್ಷ ಜೂನ್ 23ರಿಂದ 25ರ ತನಕ. ಇದನ್ನು ಪ್ರಾಣಿಗಳ ರಕ್ಷಣೆ ಮತ್ತು ಹಕ್ಕಿಗಾಗಿ ಆಚರಿಸುತ್ತಾ ಇದೆ. ಈ ವಾರದ ಮೊದಲ ದಿನವನ್ನು ಉತ್ತಮ ಗೆಳೆಯನ ದಿನವೆಂದು ಕರೆಯಲಾಗುತ್ತದೆ.
🍂🍂🍂🍂🍂🍂🍂🍂
🌹WISH U HAPPY
FREINDSHIP DAY🌹
🍂🍂🍂🍂🍂🍂🍂🍂
FM:ರೋಷನ್ ಜಗಳೂರು